ನಿಜ್ಜರ್ ಹತ್ಯೆ ನಾನೇ ಮಾಡಿದ್ದು ಎಂದ ಗೋಲ್ಡಿ ಬ್ರಾರ್?
ಒಟ್ಟಾವಾ, ಆಗಸ್ಟ್ 23: ಭಾರತ-ಕೆನಡಾ ನಡುವೆ ರಾಜತಾಂತ್ರಿಕ ಬಿಕ್ಕಟ್ಟಿಗೆ ಕಾರಣವಾಗಿದ್ದ ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣದಲ್ಲಿ ಹೊಸ ಬೆಳವಣಿಗೆ ನಡೆದಿದೆ. ಕೆನಡಾ ಮೂಲದ ಗ್ಯಾಂಗ್ಸ್ಟರ್ ಗೋಲ್ಡಿ ಬ್ರಾರ್, ನಿಜ್ಜರ್ನನ್ನು ತಾನೇ ಹತ್ಯೆ ಮಾಡಿರುವುದಾಗಿ ಹೇಳಿಕೊಂಡಿರುವ ಆಡಿಯೋ ಕ್ಲಿಪ್ ಸೋರಿಕೆಯಾಗಿದೆ ಎಂದು ವರದಿಯಾಗಿದೆ. ಖಲಿಸ್ತಾನಿ ಉಗ್ರ ಪರಮ್ಜಿತ್ ಸಿಂಗ್ ಪಮ್ಮಾ ಜೊತೆಗಿನ ದೂರವಾಣಿ ಸಂಭಾಷಣೆಯಲ್ಲಿ ಬ್ರಾರ್ ಈ ಹೇಳಿಕೆ ನೀಡಿದ್ದಾನೆ ಎನ್ನಲಾಗಿದೆ. ಆದರೆ ಆಡಿಯೋದ ಸತ್ಯಾಸತ್ಯತೆ ಕುರಿತು ಸ್ವತಂತ್ರ ದೃಢೀಕರಣ ಇನ್ನೂ ಲಭ್ಯವಾಗಿಲ್ಲ.














Comments