• Feb 03, 2026
  • NPN Log
    ದೈಹಿಕವಾಗಿ ಬಲಶಾಲಿಯಾಗಿರುವಂತೆ ಮಾನಸಿಕವಾಗಿ ಬಲಿಷ್ಠರಾಗಿರುವುದು ಸಹ ಮುಖ್ಯ. ದೈಹಿಕವಾಗಿ ಬಲಿಷ್ಠವಾಗಿರಲು ದೈಹಿಕ ಚಟುವಟಿಕೆಗಳನ್ನು ಅಭ್ಯಾಸ ಮಾಡುತ್ತೇವೆ, ಆರೋಗ್ಯಕರ ಆಹಾರವನ್ನು ಸೇವನೆ ಮಾಡುತ್ತೇವೆ. ಆದರೆ ಮಾನಸಿಕವಾಗಿ ಸದೃಢರಾಗಿರಲು ಏನು ಮಾಡಬೇಕೆಂದು ಬಹುತೇಕರಿಗೆ ಗೊತ್ತೇ ಇಲ್ಲ. ಇದಕ್ಕಾಗಿ ಚಾಣಕ್ಯರು ಹೇಳಿರುವ ಈ ಒಂದಷ್ಟು ಸಲಹೆಗಳನ್ನು ಪಾಲಿಸಿ. ಆಚಾರ್ಯ ಚಾಣಕ್ಯರು (Acharya Chanakya) ಮಾನಸಿಕ ಶಕ್ತಿಯನ್ನು ಯಶಸ್ಸಿನ ದೊಡ್ಡ ಕೀಲಿಕೈ ಎಂದು ಬಣ್ಣಿಸಿದ್ದಾರೆ. ಬಲವಾದ ಮನಸ್ಸು ವ್ಯಕ್ತಿಯನ್ನು ಕಠಿಣ ಸಂದರ್ಭಗಳಲ್ಲಿಯೂ ಶಾಂತವಾಗಿರಲು, ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳಲು ಮತ್ತು ತಮ್ಮ ಗುರಿಗಳನ್ನು ಸಾಧಿಸಲು ಸಬಲಗೊಳಿಸುತ್ತದೆ. ಆದ್ದರಿಂದ ಮಾನಸಿಕವಾಗಿ ಬಲಿಷ್ಠರಾಗಲು ಚಾಣಕ್ಯರು ಹೇಳಿರುವ ಈ ಕೆಲವು ಸಲಹೆಗಳನ್ನು ಅನುಸರಿಸಿ. ಖಂಡಿತವಾಗಿಯೂ ಇದು ನಿಮ್ಮ ಆಲೋಚನೆ, ಆತ್ಮವಿಶ್ವಾಸ ಮತ್ತು ಜೀವನಶೈಲಿಯನ್ನು ಸಂಪೂರ್ಣವಾಗಿ ಪರಿವರ್ತಿಸಬಹುದು. ಮಾನಸಿಕವಾಗಿ ಬಲಿಷ್ಠರಾಗಿರಲು ಏನು ಮಾಡಬೇಕು? ಪ್ರತಿದಿನ ಯೋಚಿಸುವ ಅಭ್ಯಾಸ ಬೆಳೆಸಿಕೊಳ್ಳಿ: ಉತ್ತಮವಾಗಿ ಯೋಚಿಸುವ ಅಭ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎನ್ನುತ್ತಾರೆ ಆಚಾರ್ಯ ಚಾಣಕ್ಯರು ಹೇಳುತ್ತಾರೆ. ನಿಮ್ಮ ಮಾನಸಿಕ ಶಕ್ತಿಯನ್ನು ಹೆಚ್ಚಿಸಲು ನೀವು ಬಯಸಿದರೆ, ನಿಮ್ಮ ಆಲೋಚನೆಗಳನ್ನು ಅರ್ಥಮಾಡಿಕೊಳ್ಳಲು ಮತ್ತು ನಿರ್ಧಾರಗಳನ್ನು ಹೇಗೆ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಯೋಚಿಸಬೇಕು. ಯೋಚಿಸಲು ಪ್ರತಿದಿನ ಒಂದಷ್ಟು ಸಮಯವನ್ನು ಮೀಸಲಿಡಬೇಕು. ಈ ಸಣ್ಣ ಅಭ್ಯಾಸವು ನಿಮ್ಮನ್ನು ಹೆಚ್ಚು ಸಹಿಷ್ಣು ಮತ್ತು ಬುದ್ಧಿವಂತರನ್ನಾಗಿ ಮಾಡಬಹುದು ಮತ್ತು ನೀವು ತೆಗೆದುಕೊಳ್ಳುವ ನಿರ್ಧಾರಗಳನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಸ್ವಾವಲಂಬಿಯಾಗಿ: ಆಚಾರ್ಯ ಚಾಣಕ್ಯರು ಹೇಳುವಂತೆ, ನೀವು ನಿಮ್ಮ ಮಾನಸಿಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಬಯಸಿದರೆ, ಮೊದಲ ಹೆಜ್ಜೆ ಸ್ವಾವಲಂಬಿಗಳಾಗುವುದು. ನೀವು ನಿಮ್ಮ ಸ್ವಂತ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಿದಾಗ, ನಿಮ್ಮ ಮನಸ್ಸು ಬಲಗೊಳ್ಳುತ್ತದೆ. ಇದಕ್ಕೆ ತದ್ವಿರುದ್ಧವಾಗಿ, ನೀವು ಇತರರನ್ನು ಅವಲಂಬಿಸಲು ಪ್ರಾರಂಭಿಸಿದಾಗ, ಅದು ನಿಮ್ಮನ್ನು ಆಂತರಿಕವಾಗಿ ದುರ್ಬಲಗೊಳಿಸುತ್ತದೆ. ಸಣ್ಣ ಜವಾಬ್ದಾರಿಗಳನ್ನು ಸಹ ನೀವೇ ತೆಗೆದುಕೊಳ್ಳಲು ಪ್ರಾರಂಭಿಸಿದಾಗ, ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುತ್ತದೆ ಮತ್ತು ಇದರಿಂದ ನೀವು ಮಾನಸಿಕವಾಗಿಯೂ ಬಲಶಾಲಿಯಾಗುತ್ತೀರಿ. ಸಮಯವನ್ನು ಸರಿಯಾದ ಬಳಸಿ: ಸಮಯವು ಅತ್ಯಮೂಲ್ಯ ಸಂಪನ್ಮೂಲ ಎಂದು ಆಚಾರ್ಯ ಚಾಣಕ್ಯ ಹೇಳುತ್ತಾರೆ. ಮಾನಸಿಕವಾಗಿ ಬಲಿಷ್ಠರಾಗಿರುವ ಜನರು ಸಮಯವನ್ನು ಗೌರವಿಸುತ್ತಾರೆ ಮತ್ತು ಅದನ್ನು ನಿಷ್ಪ್ರಯೋಜಕ ವಿಷಯಗಳಿಗೆ ವ್ಯರ್ಥ ಮಾಡುವುದಿಲ್ಲ. ಚಾಣಕ್ಯನ ಪ್ರಕಾರ, ಸಮಯಕ್ಕೆ ಸರಿಯಾಗಿ ಎಚ್ಚರಗೊಳ್ಳುವುದು, ಕೆಲಸಗಳಿಗೆ ಆದ್ಯತೆ ನೀಡುವುದು, ಪ್ರತಿಯೊಂದು ಕೆಲಸವನ್ನು ಸಮಯಕ್ಕೆ ಸರಿಯಾಗಿ ಮುಗಿಸುವ ಅಭ್ಯಾಸವು ವ್ಯಕ್ತಿಯನ್ನು ಮಾನಸಿಕವಾಗಿ ಬಲಿಷ್ಠನನ್ನಾಗಿಸುತ್ತದೆ. ನಕಾರಾತ್ಮಕ ಚಿಂತನೆಯಿಂದ ದೂರವಿರಿ: ಚಾಣಕ್ಯರ ಪ್ರಕಾರ, ನಿಮ್ಮ ಮನಸ್ಸನ್ನು ಶಾಂತವಾಗಿಡಲು ಮತ್ತು ಮೆಂಟಲಿ ಸ್ಟ್ರಾಂಗ್‌ ಆಗಿರಲು ನೀವು ಮೊದಲು ನಕಾರಾತ್ಮಕ ಚಿಂತನೆಯಿಂದ ದೂರವಿರಬೇಕು. ಹತಾಶೆ, ಭಯ ಮತ್ತು ಕೋಪದಂತಹ ಭಾವನೆಗಳು ನಿಮ್ಮ ಮನಸ್ಸನ್ನು ಸಂಪೂರ್ಣವಾಗಿ ದುರ್ಬಲಗೊಳಿಸುತ್ತವೆ. ನೀವು ಸಕಾರಾತ್ಮಕವಾಗಿ ಯೋಚಿಸಿದರೆ, ನೀವು ಪ್ರತಿಯೊಂದು ಸವಾಲುಗಳನ್ನು ಧೈರ್ಯದಿಂದ ಎದುರಿಸಿ ಜಯಿಸುತ್ತೀರಿ ಎಂದು ಆಚಾರ್ಯ ಚಾಣಕ್ಯರು ಹೇಳುತ್ತಾರೆ. ಅಲ್ಲದೆ ಈ ಸಣ್ಣ ಅಭ್ಯಾಸವು ಕ್ರಮೇಣ ನಿಮ್ಮ ಮನಸ್ಸನ್ನು ಬಲಪಡಿಸುತ್ತದೆ. ಹೊಸ ವಿಷಯಗಳನ್ನು ಕಲಿಯುವ ಅಭ್ಯಾಸ: ನಿಮ್ಮ ಮಾನಸಿಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಬಯಸಿದರೆ, ನಿಮ್ಮ ಜೀವನದ ಪ್ರತಿ ಹಂತದಲ್ಲೂ ನೀವು ಹೊಸ ವಿಷಯಗಳನ್ನು ಕಲಿಯುತ್ತಲೇ ಇರಬೇಕು ಎಂದು ಆಚಾರ್ಯ ಚಾಣಕ್ಯ ಹೇಳಿದ್ದಾರೆ. ಅವರ ಪ್ರಕಾರ, ನಿರಂತರವಾಗಿ ಹೊಸ ವಿಷಯಗಳನ್ನು ಕಲಿಯುವ ಮತ್ತು ಹೊಸ ಜ್ಞಾನವನ್ನು ಹೇಗೆಪಡೆದುಕೊಳ್ಳಬೇಕು ಎಂದು ತಿಳಿದಿರುವ ವ್ಯಕ್ತಿಯು ಕ್ರಮೇಣ ಮಾನಸಿಕವಾಗಿ ಬಲಶಾಲಿಯಾಗುತ್ತಾನೆ. ಹೀಗೆ ಜ್ಞಾನವನ್ನು ಹೆಚ್ಚಿಸಲು ನೀವು ಹೊಸ ಪುಸ್ತಕಗಳನ್ನು ಓದಬೇಕು, ಹಿಂದಿನ ಅನುಭವಗಳಿಂದ ಕಲಿಯಬೇಕು ಮತ್ತು ಇತರರಿಂದ ಏನನ್ನಾದರೂ ಒಳ್ಳೆಯ ವಿಚಾರಗಳನ್ನು ಕಲಿಯಲು ಪ್ರಯತ್ನಿಸಬೇಕು.

    You Might Also Like

    Comments

    Leave A Comment

    Don’t worry ! Your email address will not be published. Required fields are marked (*).

    Get Newsletter

    Featured News

    Advertisement

    Voting Poll (Checkbox)

    Voting Poll (Radio)

    Readers Opinion